ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಸಭೆ

ಕೊಡಗು ಜಿಲ್ಲೆಯಲ್ಲಿ ತುಳುನಾಡಿನ ಕಾರ್ನಿಕದ ದೈವಸ್ಥಾನಗಳು ಸರಿಸುಮಾರು 60 ಕ್ಕು ಹೆಚ್ಚು ಇದ್ದು ವರ್ಷಂಪ್ರತಿ ನೇಮ,ಕೋಲ ನಡೆಯುತ್ತಿದ್ದು, ಜಿಲ್ಲೆಯಲ್ಲಿರುವ ದೈವಸ್ಥಾನದ ಅಭಿವೃದ್ಧಿಗಾಗಿ ಹಾಗೂ ದೈವಆರಾಧಕರ ಮತ್ತು ದೈವನರ್ತಕರ ಕ್ಷೇಮಾಭಿವೃದ್ಧಿಗಾಗಿ ಮತ್ತು ದೈವದ ಬಗ್ಗೆ ಅಪಮಾನ, ಅಪಹಾಸ್ಯ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ .

ಸಂಘವನ್ನು ನೊಂದವಾಣೆ ಮಾಡಿಕೊಳ್ಳಲಾಗಿದ್ದು, ಈ ವಿಚಾರವಾಗಿ ದಿನಾಂಕ 26/08/2023 ನೇ ಶನಿವಾರ ಬೆಳಗ್ಗೆ 10:00 ಗಂಟೆಗೆ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಸದಾಶಿವ ರೈ ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಗೆ ಜಿಲ್ಲೆಯ ದೈವ ಆರಾಧಕರು ಮತ್ತು ದೈವ ನರ್ತಕರು ಪಾಲ್ಗೊಳ್ಳುವಂತೆ ದೈವಾಆರಾಧಕರು ಮತ್ತು ದೈವನರ್ತಕರ ಸಂಘದ ಸ್ಥಾಪಕ ಪಿ.ಎಂ. ರವಿ ತಿಳಿಸಿದ್ದಾರೆ.

Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಮಾಹಿತಿಗಾಗಿ : 9972073295,  9480290688

0 0 votes
Article Rating
Subscribe
Notify of
guest
0 Comments
Oldest
Newest Most Voted
error: Content is protected !!
0
Would love your thoughts, please comment.x
()
x