ಚೌತಿಯ ಪ್ರಯುಕ್ತ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಸೆ-19ರಂದು ಸಾಮೂಹಿಕ ಗಣಪತಿ ಹೋಮ

ಚೌತಿಯ ಪ್ರಯುಕ್ತ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಸಾಮೂಹಿಕ ಗಣಪತಿ ಹೋಮ ಏರ್ಪಡಿಸಲಾಗಿದ್ದು ಊರಿನವರು ಮಾತ್ರವಲ್ಲದೆ ಸಾರ್ವಜನಿಕರು ಯಾರು ಬೇಕಾದರೂ ಬಂದು ಪೂಜೆ ಮಾಡಿಸಬಹುದಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ತಕ್ಕ ಮುಖ್ಯಸ್ಥರು ಹಾಗೂ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಇದೇ ಸೆಪ್ಟೆಂಬರ್ 19ರಂದು ಚೌತಿ ಪೂಜೆ ನಡೆಯಲಿದ್ದು ಊರಿನವರು ಮಾತ್ರವಲ್ಲದೆ ಸಾರ್ವಜನಿಕರು ಯಾರು ಬೇಕಾದರೂ ಸಾಮೂಹಿಕ ಗಣಪತಿ ಹೋಮದಲ್ಲಿ ಪಾಲ್ಗೊಂಡು ಪೂಜೆ ಮಾಡಿಸಬಹುದಾಗಿದೆ. ಅಂದು ಬೆಳಿಗ್ಗೆ 7-30 ಗಂಟೆಗೆ ಗಣಪತಿ ಹೋಮ ಆರಂಭವಾಗಲಿದ್ದು ಪ್ರಸಾದ ವಿನಿಯೋಗದ ಬಳಿಕ ಬೆಳಗಿನ ಉಪಹಾರ ಇರುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಪೂಜೆ ಮಾಡಿಸುವವರು ಒಂದು ದಿನ ಮುಂಚಿತವಾಗಿ ಪೂಜಾ ಸಾಮಗ್ರಿಗಳನ್ನು ನೀಡುವ ಮೂಲಕ ಪೂಜೆಯ ಬಗ್ಗೆ ಮಾಹಿತಿ ನೀಡಬೇಕಿದೆ. ಹೆಚ್ಚಿನ ಮಾಹಿತಿಗೆ: 9845308910 ಅಥವಾ 9483815430 ಸಂಪರ್ಕಿಸಬಹುದಾಗಿದೆ.

ಹಂಚಿಕೊಳ್ಳಿ
5 1 vote
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x