ಜುಮಾ ಮಸೀದಿಯಿಂದ ಕೋಕ್ಕಂಡ ಬಾಣೆ ದರ್ಗಾಕ್ಕೆ ಪ್ರವಾದಿ ಸಂದೇಶ ಜಾಥಾ
ಕಡಂಗ, ಸೆ 28. ಬದ್ರಿಯ ಜುಮಾ ಮಸೀದಿ ಹಾಗೂ ತಾಜುಲ್ ಉಲಮಾ ಮದರಸ ವತಿಯಿಂದ ವಿಜೃಂಭಣೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುರಹ್ಮಾನ್ ಅರಫಾ ದ್ವಜಾರೋಹಣ ನೆರವೆರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Official
ಸರ್ಚ್ ಕೊಡಗು ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಜುಮಾ ಮಸೀದಿಯಿಂದ ಅದ್ದೂರಿ ಮೆರವಣಿಗೆ ಪಟ್ಟಣದಲ್ಲಿ ಸಾಗಲಾಯಿತು. ವಿದ್ಯಾರ್ಥಿಗಳಿಂದ ಧಫ್,ಸ್ಕೌಟ್, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಾರ್ಥನೆಯನ್ನು ಜಮಹತ್ ಖತೀಬ್ ಇಸ್ಮಾಯಿಲ್ ಲತೀಫಿ ನೆರವಿರಿಸಿದರು. ಈ ಸಂದರ್ಭದಲ್ಲಿ ಮದರಸ ಮುಖ್ಯೋಪಾಧ್ಯಾಯದರಾದ ಸಿಯಬುದ್ದಿನ್ ಜೌಹರಿ, ಜಮಾಅತ್ ಆಡಳಿತ ಮಂಡಳಿತಯ ಪದಾಧಿಕಾರಿಗಳು ಮತಿತ್ತರರು ಉಪಸ್ಥಿತರಿದ್ದರು.
ವರದಿ: ನೌಫಲ್ ಕಡಂಗ
