ಚೆಯ್ಯಂಡಾಣೆಯಲ್ಲಿ ಜೆಜೆಎಂ ಕಾಮಗಾರಿ ಪೂರ್ಣ-ದೊರಕದ ನೀರು -ಲೋಕಾಯುಕ್ತಕ್ಕೆ ದೂರು ರಾಜೇಶ್ ಅಚ್ಚಯ್ಯ

Reading Time: 2 minutes

ಚೆಯ್ಯ0ಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಚೆಸ್ಕಾಂ ನಿರ್ಲಕ್ಷ್ಯದಿಂದ ನೀರು ದೊರೆಯುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ ಆರೋಪಿಸಿದ್ದು, ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ರಾಜೇಶ್ ಅಚ್ಚಯ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಟ್ರಾನ್ಸ್ಫಾರ್ಮರ್ ಆಳವಡಿಸಿದ್ದು, ಮೀಟರ್ ಕೂಡ ಅಳವಡಿಸಲಾಗಿದೆ. ಆದರೆ ಚೆಸ್ಕಾಂ ನಿರ್ಲಕ್ಷ್ಯತೋರಿ ಪವರ್ ಸಪ್ಲೈ ಮಾತ್ರ ನೀಡುತ್ತಿಲ್ಲ,ಈ ಬಗ್ಗೆ ಮಾನ್ಯ ಶಾಸಕರ ಗಮನಕ್ಕೆ ತಂದ ಸಂದರ್ಭ ಕೂಡಲೇ ಚೆಸ್ಕಾಂ ಇಲಾಖೆಗೆ ಕ್ರಮ ಕೈಗೊಳ್ಳಲು ಶಾಸಕರು ತಿಳಿಸಿದ್ದರು. ಆದರೂ ಇದುವರೆಗೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ಪಂಚಾಯತಿ ವ್ಯಾಪ್ತಿಯ ತಟ್ಟಮಕ್ಕಿ ಪೈಸಾರಿಗೆ 15 ದಿನದಿಂದ ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದ ಗ್ರಾಮ ಪಂಚಾಯಿತಿ ಸದಸ್ಯನಾದ ನಾನು ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದೇನೆ ಎಂದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x