ನೂತನ ಶಾಸಕ ಎ.ಎಸ್ ಪೊನ್ನಣ್ಣನವರನ್ನು ಅಭಿನಂದಿಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿಟ್ಟ ಕೊಡವ ರೈಡರ್ಸ್ ಕ್ಲಬ್

Reading Time: 2 minutes

ಕೊಡಗು ಜಿಲ್ಲೆಯಲ್ಲಿ ಕನಸಾಗಿಯೇ ಉಳಿದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕನಸ್ಸನ್ನು ನನಸು ಮಾಡಲು ಹಾಗೂ ಜಿಲ್ಲೆಯ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆಗೆ ಕೊಡವ ರೈಡರ್ಸ್ ಕ್ಲಬ್ ಒತ್ತಾಯ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡು, ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದಿರುವ ಅಜ್ಜಿಕುಟ್ಟೀರ ಎಸ್ ಪೊನ್ನಣ್ಣನವರನ್ನು ಇತ್ತಿಚೆಗೆ ಬೆಂಗಳೂರಿನ ಕಛೇರಿಯಲ್ಲಿ ಭೇಟಿಯಾದ ಕೊಡವ ರೈಡರ್ಸ್ ಕ್ಲಬ್ ಪ್ರಮುಖರು ಸಂಸ್ಥೆಯ ಪರವಾಗಿ ಹೂಗುಚ್ಛ ಕೊಟ್ಟು ಅಭಿನಂದಿಸಿ ನೆನಪಿನ ಕಾಣಿಕೆ ನೀಡಿ ಕೊಡಗು ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ತೆರೆಯುವ ಮೂಲಕ ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮುಂದಾಗಬೇಕು ಎಂಬ ಬೇಡಿಕೆಯೊಂದಿಗೆ, ಕೊಡಗಿನ ಪ್ರಮುಖ ಬೆಳೆಗಳಾದ ಭತ್ತ, ಕಾಫಿ ಹಾಗೂ ಕರಿಮೆಣಸಿನ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ ಹೇರಬೇಕು ಎಂಬ ಮನವಿಯನ್ನು ನೀಡಿದ್ದರು. ಈ ಸಂದರ್ಭದಲ್ಲಿ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ, ಕಾರ್ಯದರ್ಶಿ ಸಣ್ಣುವಂಡ ದರ್ಶನ್ ಕಾವೇರಪ್ಪ,
ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಗಾನ ಸುಬ್ಬಯ್ಯ, ಪ್ರಮುಖರಾದ ಮುರುವಂಡ ಸುಮಾ ಕುಟ್ಟಪ್ಪ, ಮೂಕಚಂಡ ಶಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x