ಚೆಯ್ಯಂಡಾಣೆಯಲ್ಲಿ ಗೌರಿ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ

ಚೆಯ್ಯಂಡಾಣೆ,19. ಸ್ಥಳೀಯ ಗಣೇಶ ಸೇವಾ ಸಮಿತಿಯ ವತಿಯಿಂದ ಲಕ್ಷ್ಮಿ ಮಹಿಳಾ ಸಮಾಜದಲ್ಲಿ ವರ್ಷಂ ಪ್ರತಿ ಆಚರಿಸಿಕೊಂಡು ಬರುವ ಶ್ರೀ ಗೌರಿ ಗಣೇಶೋತ್ಸವ ವಿಜೃಂಭಣೆ ಯಿಂದ ನಡೆಯಿತು.
ಬೆಳಿಗ್ಗೆ 6 ಗಂಟೆಗೆ ಶ್ರೀ ಗಣಪತಿ ಹೋಮ,ನಂತರ ಗೌರಿ ಮತ್ತು ಮಹಾ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ, ಮಹಾ ಮಂಗಳಾರತಿ,ಪ್ರಸಾದ ವಿನಿಯೋಗ ನಡೆಯಿತು.ನೆರದಿದ್ದ ಭಕ್ತದಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಪೂಜಾ ಕಾರ್ಯಗಳನ್ನು ಅರ್ಚಕರಾದ ಪೃಥ್ವಿ ರವರು ನೆರವೇರಿಸಿದರು.

ಮಧ್ಯಾಹ್ನದ ನಂತರ ಮಹಾಗಣಪತಿ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಕರಡ ಹೊಳೆಯಲ್ಲಿ ವಿಸರ್ಜಿಸಲಾಯಿತು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

5 1 vote
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x