ನಾಪೋಕ್ಲು : ನಾಪೋಕ್ಲು ವ್ಯಾಪ್ತಿಯಲ್ಲಿ ಮುಂಬರುವ ದಿನಗಳಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಪೋಕ್ಲುವಿನಲ್ಲಿ ಸೋಮವಾರ ಪಥಸಂಚಲನ ನಡೆಯಿತು.
ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸುವ ಮೂಲಕ ನಾಗರಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ ಎಂಬ ಸಂದೇಶವನ್ನು ರವಾನಿಸಿದರು.
Official
ಸರ್ಚ್ ಕೊಡಗು ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ನಾಪೋಕ್ಲು: ಝಕರಿಯ ನಾಪೋಕ್ಲು
