ಸಾಮಾಜಿಕ ಜಾಲತಾಣಗಳ ಮೂಲಕ ನೇರವಾಗುವ ಜಾಬಿರ್ ನಿಝಾಮಿ ಗೆ ಸನ್ಮಾನ

ಕಡಂಗ: ಸ್ಥಳೀಯ ಶಾದಿಮಹಲ್ ಸಭಾಂಗಣದಲ್ಲಿ ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ ಕಡಂಗ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಾಮಾಜಿಕ ಜಾಲತಾಣದ ಮೂಲಕ ಕೊಡಗಿನ ಹಾಗೂ ಕರ್ನಾಟಕ ಹಾಗೂ ಕೇರಳದ ನಾನಾ ಭಾಗಗಳಲ್ಲಿ ಹಲವಾರು ರೋಗಿಗಳಿಗೆ ಹಾಗೂ ಬಡ ಅನಾಥ ಕುಟುಂಬಕ್ಕೆ ಸಹಾಯಕ್ಕಾಗಿ ಜಾಲತಾಣಗಳ ಮೂಲಕ ವಿಡಿಯೋ ಮಾಡಿ ಜನ ಮನ ಗೆದ್ದ ಚಾರೀಟಿ ಕಾರ್ಯಕರ್ತ ನಾಪೋಕ್ಲು ಸಮೀಪದ ಚೆರಿಯಪರಂಬು ನಿವಾಸಿ ಜಾಬಿರ್ ನಿಝಾಮಿ (ಸೇವ್ ದಿ ಡ್ರಿಮ್ಸ್ ಟ್ರಸ್ಟ್) ಯವರನ್ನು ಕಡಂಗದ ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿಯ ಅಧ್ಯಕ್ಷ ಜುನೈದ್ ಸಿ.ಎ. ವಹಿಸಿದರು. ಈ ಸಂದರ್ಭ ಸೇವ್ ದಿ ಡ್ರಿಮ್ಸ್ ನ ನಿರ್ದೇಶಕರಾದ ಮೈಸಿ ಕತ್ತಣಿರ, ಆರಫಾತ್, ಅಹ್ಮದ್ ನಾಪೋಕ್ಲು,ಹೋದ್ದೂರು ಗ್ರಾ.ಪಂ. ಸದಸ್ಯ ಮೊಯ್ದು, ಮೊಯ್ಯದ್ದೀನ್ ಮಸೀದಿಯ ಮಾಜಿ ಅಧ್ಯಕ್ಷ ಇಬ್ರಾಹಿಂ,ಮೊಯ್ದು ಮುಸ್ಲಿಯಾರ್, ಕೆಡಿಎಸ್ ನಿರ್ದೇಶಕರಾದ ಫತಾಯಿ, ಅಬ್ದುಲ್ ರಹ್ಮನ್, ಉಸ್ಮಾನ್,ಸುಬೈರ್,ರಝಾಕ್ ಪಿ.ಇ, ಕೆಡಿಎಸ್ ಆಡಳಿತ ಮಂಡಳಿಯ ಮಮ್ಮು,ರಝಾಕ್ ಸಿ.ಎ,ಸೌಕತ್,ಶರೀಫ್,ರಝಿಕ್ ಎ.ಎ.,ಮುಜೀಬ್,ಮತಿತ್ತರರು ಇದ್ದರು. ಸ್ವಾಗತವನ್ನು ಕೆಡಿಎಸ್ ಚಾರೀಟಿ ಯ ಆಡಳಿತ ಮಂಡಳಿಯ ಸದಸ್ಯ ಹಾಗೂ ಪತ್ರಕರ್ತ ಅಶ್ರಫ್, ವಂದನೆಯನ್ನು ಅಬ್ದುಲ್ ರಹ್ಮಾನ್ ನೆರವೇರಿಸಿದರು.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ವರದಿ:  ನೌಫಲ್ ಕಡಂಗ

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x