ನಾಪೋಕ್ಲು ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ
ದೇವಾಲಯ ಸ್ವಚ್ಛಗೊಳಿಸಿದ ಧರ್ಮಸ್ಥಳ ಸಂಘದ ಸದಸ್ಯರು
Official
ಸರ್ಚ್ ಕೊಡಗು ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲು ಸುಭಾಷ್ ನಗರ ಕಾರ್ಯ ಕ್ಷೇತ್ರದ ಸದಸ್ಯರಿಂದ ಸ್ಥಳೀಯ ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದ ಸುತ್ತಮುತ್ತಲು ಬೆಳೆದಿದ್ದ ಕುರುಚಲು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸದಸ್ಯರಾದ ರೇವತಿ, ಸುಶೀಲ, ಹಸೀನಾ, ಪೊನ್ನಮ್ಮ, ಕುಲ್ಸ ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.
