Kanchi Kamakshiyamma

Reading Time: 2 minutesWhatsApp Links ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ ವಾಟ್ಸಾಪ್ ಚಾನಲ್‌ ಫಾಲೋ ಮಾಡಿ ಈ ದೇವಾಲಯವು ಮಡಿಕೇರಿಯ ಗೌಳಿ ಬೀದಿಯಲ್ಲಿದ್ದು, ಸೌಮ್ಯ ಸ್ವರೂಪಿಣಿಯಾದ ಕಂಚಿಕಾಮಾಕ್ಷಿದೇವಿಯೂ, ಉಗ್ರ ಸ್ವರೂಪಿಣಿಯಾದ ಮುತ್ತು ಮಾರಿಯಮ್ಮ ದೇವಿಯನ್ನು ಈ ದೇವಸ್ಥಾನದಲ್ಲಿ ಪ್ರತ್ಯೇಕವಾಗಿ ಗರ್ಭಗುಡಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗಿದೆ. ಶಕ್ತಿ ದೇವಿಗಳಲ್ಲಿ ಒಂದಾಗಿರುವ ಶ್ರೀ ಕಂಚಿಕಾಮಾಕ್ಷಿ ದೇವಿಯು ಪ್ರಜೆಗಳ ಕಷ್ಟ-ಕಾರ್ಪಣ್ಯಗಳ ನಿವಾರಕಿಯೆನಿಸಿಕೊಂಡಿದ್ದಾಳೆ. ಕೈಯಲ್ಲಿ ಗಿಣಿಯನ್ನು ಹಿಡಿದುಕೊಂಡಿರುವುದು ಈ ಶಾಂತ ಸ್ವರೂಪಿಣಿಯ ವೈಶಿಷ್ಟತೆ. ಈ ಪುರಾತನ ದೇಗುಲವು ಕಾಲಾಂತರದಿಂದ ಹಲವಾರು ಮಾರ್ಪಾಟುಗಳನ್ನು ಹೊಂದುತ್ತಾ ಬಂದು ಪ್ರಸ್ತುತ ನಗರದ ಬೃಹತ್ ದೇವಾಲಯಗಳಲ್ಲಿ ಒಂದೆನಿಸಿದೆ. ಗರ್ಭಗುಡಿಯಲ್ಲಿ ಪುರಾತನ ಮೂಲ ವಿಗ್ರಹವಿದೆ. ನವೀಕರಣಗೊಂಡಿರುವ ಬೃಹತ್ ದೇಗುಲಕ್ಕೆ ವಿಶಿಷ್ಟವಾದ ರಾಜಗೋಪುರ ನಿರ್ಮಾಣವಾಗಿದೆ. ಈ ರಾಜಗೋಪುರ ಹೊಯ್ಸಳ ಶೈಲಿಯಲ್ಲಿದೆ. ಈ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಠಮಿ, ಅಯ್ಯಪ್ಪ ಸ್ವಾಮಿ ಪೂಜೆಗಳು ನಡೆಯುತ್ತದೆ. ನವರಾತ್ರಿಯಂದು ಕರಗವನ್ನು ಹೊರಡಿಸುತ್ತಾರೆ. ನಂತರ ಕುಂಭ ಪೂಜೆ, ಶಾಂತಿ ಪೂಜೆಗಳು ನಡೆಯುವದರ ಜೊತೆಗೆ ಏಪ್ರಿಲ್ ತಿಂಗಳಲ್ಲಿ ಮಾರಿಯಮ್ಮ ಉತ್ಸವ ಪೂಜೆಯನ್ನು ವಿಜ್ರಂಭಣೆಯಿಂದ ಆಚರಿಸುತ್ತಾರೆ. ಇಲ್ಲಿ ವ್ಯತ್ಯಾಸವೆಂದರೆ ಮಾರಿಯಮ್ಮ ಕರಗವನ್ನು ಹೂವಿನ ಬದಲು ಬೇವಿನ ಎಲೆಯಿಂದ ಅಲಂಕರಿಸಲಾಗುತ್ತದೆ. ಈ ದೇವಾಲಯದ ಪೂಜೆಯನ್ನು ಗೌಳಿ (ಯಾದವ) ಜನಾಂಗದವರು ನೆರವೇರಿಸುತ್ತಾರೆ.  

WhatsApp Links
WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ
Reading Time: 2 minutes

Kanchi Kamakshiyamma.jpg ºÀ
Kanchi Kamakshiyammah

ಈ ದೇವಾಲಯವು ಮಡಿಕೇರಿಯ ಗೌಳಿ ಬೀದಿಯಲ್ಲಿದ್ದು, ಸೌಮ್ಯ ಸ್ವರೂಪಿಣಿಯಾದ ಕಂಚಿಕಾಮಾಕ್ಷಿದೇವಿಯೂ, ಉಗ್ರ ಸ್ವರೂಪಿಣಿಯಾದ ಮುತ್ತು ಮಾರಿಯಮ್ಮ ದೇವಿಯನ್ನು ಈ ದೇವಸ್ಥಾನದಲ್ಲಿ ಪ್ರತ್ಯೇಕವಾಗಿ ಗರ್ಭಗುಡಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗಿದೆ. ಶಕ್ತಿ ದೇವಿಗಳಲ್ಲಿ ಒಂದಾಗಿರುವ ಶ್ರೀ ಕಂಚಿಕಾಮಾಕ್ಷಿ ದೇವಿಯು ಪ್ರಜೆಗಳ ಕಷ್ಟ-ಕಾರ್ಪಣ್ಯಗಳ ನಿವಾರಕಿಯೆನಿಸಿಕೊಂಡಿದ್ದಾಳೆ. ಕೈಯಲ್ಲಿ ಗಿಣಿಯನ್ನು ಹಿಡಿದುಕೊಂಡಿರುವುದು ಈ ಶಾಂತ ಸ್ವರೂಪಿಣಿಯ ವೈಶಿಷ್ಟತೆ. ಈ ಪುರಾತನ ದೇಗುಲವು ಕಾಲಾಂತರದಿಂದ ಹಲವಾರು ಮಾರ್ಪಾಟುಗಳನ್ನು ಹೊಂದುತ್ತಾ ಬಂದು ಪ್ರಸ್ತುತ ನಗರದ ಬೃಹತ್ ದೇವಾಲಯಗಳಲ್ಲಿ ಒಂದೆನಿಸಿದೆ. ಗರ್ಭಗುಡಿಯಲ್ಲಿ ಪುರಾತನ ಮೂಲ ವಿಗ್ರಹವಿದೆ. ನವೀಕರಣಗೊಂಡಿರುವ ಬೃಹತ್ ದೇಗುಲಕ್ಕೆ ವಿಶಿಷ್ಟವಾದ ರಾಜಗೋಪುರ ನಿರ್ಮಾಣವಾಗಿದೆ. ಈ ರಾಜಗೋಪುರ ಹೊಯ್ಸಳ ಶೈಲಿಯಲ್ಲಿದೆ. ಈ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಠಮಿ, ಅಯ್ಯಪ್ಪ ಸ್ವಾಮಿ ಪೂಜೆಗಳು ನಡೆಯುತ್ತದೆ. ನವರಾತ್ರಿಯಂದು ಕರಗವನ್ನು ಹೊರಡಿಸುತ್ತಾರೆ. ನಂತರ ಕುಂಭ ಪೂಜೆ, ಶಾಂತಿ ಪೂಜೆಗಳು ನಡೆಯುವದರ ಜೊತೆಗೆ ಏಪ್ರಿಲ್ ತಿಂಗಳಲ್ಲಿ ಮಾರಿಯಮ್ಮ ಉತ್ಸವ ಪೂಜೆಯನ್ನು ವಿಜ್ರಂಭಣೆಯಿಂದ ಆಚರಿಸುತ್ತಾರೆ. ಇಲ್ಲಿ ವ್ಯತ್ಯಾಸವೆಂದರೆ ಮಾರಿಯಮ್ಮ ಕರಗವನ್ನು ಹೂವಿನ ಬದಲು ಬೇವಿನ ಎಲೆಯಿಂದ ಅಲಂಕರಿಸಲಾಗುತ್ತದೆ. ಈ ದೇವಾಲಯದ ಪೂಜೆಯನ್ನು ಗೌಳಿ (ಯಾದವ) ಜನಾಂಗದವರು ನೆರವೇರಿಸುತ್ತಾರೆ.
ಹಂಚಿಕೊಳ್ಳಿ
error: Content is protected !!