ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ ಗೋಶಾಲೆಯಿಂದ ಪ್ರಥಮ ವರ್ಷದ “ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ.
ಶ್ರೀ ರಾಮಚಂದ್ರಾಪುರ ಮಠ, ಹೊಸನಗರದ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ, ಸಂಪಾಜೆ ಗೋಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ: 07-12-2024 ರಂದು ಆಯ್ದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ದೇಶೀ ಗೋ ಪಾಲಕರಿಗೆ “ಜೇಡ್ಲ ಗೋಕುಲ ತಿಲಕ-24” ಎಂಬ ಬಿರುದಿನೊಂದಿಗೆ ಪ್ರೋತ್ಸಾಹ ಧನ ಹಾಗೂ ಪ್ರಶಂಸನಾ ಪತ್ರ ನೀಡಲಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Official
ಸರ್ಚ್ ಕೊಡಗು ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅರ್ಹ ದೇಶೀ ಗೋ ಪಾಲಕರು 22-11-24 ರ ಮೊದಲು ಅರ್ಜಿಯನ್ನು ಸಲ್ಲಿಸಲು ಪ್ರಕಟಣೆ ತಿಳಿಸಿದೆ. ವಿವರಗಳಿಗಾಗಿ:9886266120 ಅಥವಾ 9481979526 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.
