ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೋ ಬಿಡುಗಡೆ ಸಮಾರಂಭ ಜ.11 ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ.
ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುದ್ದಂಡ ಕಪ್ ಹಾಕಿ ಹಬ್ಬದ ಅಧ್ಯಕ್ಷ ರಶಿನ್ ಸುಬ್ಬಯ್ಯ ಅವರು ಮಾಹಿತಿ ನೀಡಿದಂತೆ, ಲೋಗೋ ಬಿಡುಗಡೆ ಸಮಾರಂಭವು ಮುದ್ದಂಡ ಒಕ್ಕದ ಪಟ್ಟೆದಾರ ಮುದ್ದಂಡ ಡಾಲಿ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಮಂಡೇಪಂಡ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರು ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ ಹಾಗೂ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಭಾಗವಹಿಸಲಿದ್ದಾರೆ.
ಈ ಪಂದ್ಯಾವಳಿಯು ಮಾರ್ಚ್ 28 ರಿಂದ ಪ್ರಾರಂಭವಾಗಿ ಏಪ್ರಿಲ್ 27 ರಂದು ಕೊನೆಗೊಳ್ಳುವ ಮೂಲಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಪೊಲೀಸ್ ಮೈದಾನದಲ್ಲಿ ನಡೆಯಲಿದೆ. ಉಳಿದಂತೆ, 2.50 ಕೋಟಿ ರೂ. ಖರ್ಚು ಹಾಕಲಾಗಿದ್ದು, ಈ ಬಾರಿ ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿ ಮಹಿಳಾ ಹಾಕಿ ಪಂದ್ಯಾವಳಿಯೂ ಆಯೋಜಿಸಲಾಗಿದೆ. 50 ರಿಂದ 80 ತಂಡಗಳು ಭಾಗವಹಿಸಲಿದೆ ಎನ್ನಲಾಗಿದೆ.
ಹಾಕಿ ಹಬ್ಬದ ಕೊನೆಯ 12 ದಿನಗಳಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ. ಅಲ್ಲದೆ, ಗೋಣಿಕೊಪ್ಪದಿಂದ ಮಡಿಕೇರಿಯವರೆಗೆ 45 ಕಿ.ಮೀ. ಸೈಕ್ಲಥಾನ್ನೂ ಆಯೋಜಿಸಲಾಗುವುದು. ಪುರುಷರ ಹಾಕಿಗೆ 1,000 ರೂ. ಮತ್ತು ಮಹಿಳಾ ಹಾಕಿಗೆ 500 ರೂ. ಪ್ರವೇಶ ಶುಲ್ಕವನ್ನು ನಿಗಧಿಪಡಿಸಲಾಗಿದೆ.
ಹಾಕಿ ಉತ್ಸವದ ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ ಅವರು ಹೇಳಿದಂತೆ, ಜ.12ರಿಂದ ತಂಡಗಳ ನೋಂದಣಿ ಪ್ರಾರಂಭವಾಗಲಿದೆ. ಈಗಾಗಲೇ 500 ಕೊಡವ ಕುಟುಂಬಗಳು ಸಂಪರ್ಕದಲ್ಲಿದ್ದು, 400ಕ್ಕೂ ಅಧಿಕ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಗೌರವಾಧ್ಯಕ್ಷ ಮುದ್ದಂಡ ಬಿ. ದೇವಯ್ಯ ಅವರು ಸರ್ಕಾರದಿಂದ 1.50 ಕೋಟಿ ರೂ. ಅನುದಾನದ ನಿರೀಕ್ಷೆ ಮಾಡುತ್ತಿದ್ದಾರೆ ಮತ್ತು ಸಹಕಾರಕ್ಕಾಗಿ ಕೊಡವ ಸಮಾಜ ಹಾಗೂ ಕೊಡವ ಕುಟುಂಬಗಳ ಸಹಕಾರವನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ.
ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರು ಕೂಡ, “ಮುದ್ದಂಡ ಹಾಕಿ ಉತ್ಸವ”ಕ್ಕೆ ಅಕಾಡೆಮಿಯ ಪೂರಕ ಸಹಕಾರವನ್ನು ನೀಡಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ ಹಾಗೂ ಸದಸ್ಯ ಮುದ್ದಂಡ ಟಿ. ಬೆಳ್ಯಪ್ಪ ಉಪಸ್ಥಿತರಿದ್ದರು.