Deprecated: Creation of dynamic property Featured_Image_By_URL::$admin is deprecated in /home/u472122668/domains/searchcoorg.com/public_html/wp-content/plugins/featured-image-by-url/featured-image-by-url.php on line 56

Deprecated: Creation of dynamic property Featured_Image_By_URL::$common is deprecated in /home/u472122668/domains/searchcoorg.com/public_html/wp-content/plugins/featured-image-by-url/featured-image-by-url.php on line 57

Notice: Function _load_textdomain_just_in_time was called incorrectly. Translation loading for the push-notification domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/u472122668/domains/searchcoorg.com/public_html/wp-includes/functions.php on line 6131
ನಾಪೋಕ್ಲಿನಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜೆ: ಅ. 1 ರಂದು ಅಲಂಕೃತ ವಾಹನಗಳ ಮೆರವಣಿಗೆ - Search Coorg Media
Subscribe now OK No thanks
ನಾಪೋಕ್ಲಿನಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜೆ: ಅ. 1 ರಂದು ಅಲಂಕೃತ ವಾಹನಗಳ ಮೆರವಣಿಗೆ
Reading Time: 4 minutes



ನಾಪೋಕ್ಲಿನಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜೆ: ಅ. 1 ರಂದು ಅಲಂಕೃತ ವಾಹನಗಳ ಮೆರವಣಿಗೆ

ನಾಪೋಕ್ಲಿನಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜೆ: ಅ. 1 ರಂದು ಅಲಂಕೃತ ವಾಹನಗಳ ಮೆರವಣಿಗೆ

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ನಾಪೋಕ್ಲು: ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಅಕ್ಟೋಬರ್ 1 ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಟಿ.ಪಿ. ಸುಕುಮಾರ್ ತಿಳಿಸಿದ್ದಾರೆ.

ನಾಪೋಕ್ಲು ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ವಿವರಗಳನ್ನು ಪ್ರಕಟಿಸಿದರು.

ಕಾರ್ಯಕ್ರಮಗಳ ವಿವರ

ವಾಹನ ಮೆರವಣಿಗೆ ಮತ್ತು ಪೂಜೆ:

  • ಮೆರವಣಿಗೆ: ಅಕ್ಟೋಬರ್ 1 ರಂದು ಮಧ್ಯಾಹ್ನ 2 ಗಂಟೆಗೆ ಹಳೆ ತಾಲೂಕು ಆವರಣದಿಂದ ಅಲಂಕೃತ ವಾಹನಗಳ ಭವ್ಯ ಮೆರವಣಿಗೆ ನಡೆಯಲಿದೆ.
  • ಸಾಮೂಹಿಕ ಆಯುಧ ಪೂಜೆ: ಸಂಜೆ 4 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ಸೈಕಲ್, ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರ ಸೇರಿದಂತೆ ಎಲ್ಲ ವಾಹನಗಳಿಗೆ ಸಾಮೂಹಿಕ ಆಯುಧ ಪೂಜೆ ನೆರವೇರಿಸಲಾಗುತ್ತದೆ.

ಸ್ಪರ್ಧೆ ಮತ್ತು ಬಹುಮಾನ ವಿತರಣೆ:

ವಿವಿಧ ವಾಹನ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಸಂಘದ ವತಿಯಿಂದ ವಿತರಿಸಲಾಗುವುದು ಎಂದು ಸುಕುಮಾರ್ ಹೇಳಿದರು.

ಸಭಾ ಕಾರ್ಯಕ್ರಮ ಮತ್ತು ಗಣ್ಯರ ಉಪಸ್ಥಿತಿ

ಸಂಜೆ 6 ಗಂಟೆಗೆ ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ. ಸುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಮುಖ್ಯ ಅತಿಥಿಗಳು:

ಕಾರ್ಯಕ್ರಮಕ್ಕೆ ಶಾಸಕ ಎ.ಎಸ್. ಪೊನ್ನಣ್ಣ, ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಪೆÇಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹೊದ್ದೂರು ಗ್ರಾ.ಪಂ. ಅಧ್ಯಕ್ಷ ಹಂಸ, ಪಾರಾಣೆ ಗ್ರಾ.ಪಂ. ಅಧ್ಯಕ್ಷ ಪಾಡಿಯಂಡ ಕಟ್ಟಿ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಯೋಜನೆಯ ಉಪಾಧ್ಯಕ್ಷ ಬೊಳ್ಳಂಡ ಗಿರೀಶ್, ಸೆಂಟ್ ಮೇರಿಸ್ ಚರ್ಚಿನ ಧರ್ಮಗುರು ಜ್ಞಾನಪ್ರಕಾಶ್, ಮಾಜಿ ತಾಲೂಕು ಪಂಚಾಯತಿ ಸದಸ್ಯೆ ಉಮಾ ಪ್ರಭು, ಕಾಫಿ ಬೆಳೆಗಾರ ರಮೇಶ್ ಮುದ್ದಯ್ಯ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿಕಾರಿಯಪ್ಪ, ಹಾಗೂ ಕಾಫಿ ಬೆಳೆಗಾರ ಅರೆಯಡ ರತ್ನ ಪೆಮ್ಮಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇತರ ಗಣ್ಯರು:

ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ, ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರದೀಪ, ಹಿಂದು ಮಲಯಾಳಿ ಸಮಾಜದ ಅಧ್ಯಕ್ಷ ಅನಿಲ್ ಕೆ.ಕೆ, ಜಯ ಕಾಫಿ ಕ್ಯೂರಿಂಗ್ ವಕ್ರ್ಸ್ ನ ಮಾಲೀಕ ಮಂಡಿರ ಕಿಶೋರ್ ತಮ್ಮಯ್ಯ, ಉದ್ಯಮಿ ಕಂಗಣ್ಣ ಅರುಣ್ ಮಂದಣ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮನ್ಸೂರ್ ಆಲಿ, ಗ್ರಾ.ಪಂ. ಸದಸ್ಯ ಚೀಯಕಪೂವಂಡ ಸತೀಶ್ ದೇವಯ್ಯ, ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ರೋಜಿ ಚಿಣ್ಣಪ್ಪ, ಬಿ.ಆರ್ ವಸಂತ, ಅಬ್ದುಲ್ ರಜಾಕ್, ಸಂಘದ ಗೌರವಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಗ್ರಾ.ಪಂ. ಸದಸ್ಯ ಮಹಮ್ಮದ್ ಕುರೈಸಿ, ಕಾಫಿ ಬೆಳೆಗಾರರಾದ ಕರವಂಡ ಸುರೇಶ್, ಕರವಂಡ ಲವ ನಾಣಯ್ಯ, ಹಾಗೂ ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಉಪಸ್ಥಿತರಿರುವರು.

ಮನರಂಜನೆ ಮತ್ತು ಸನ್ಮಾನ

ಸಭಾ ಕಾರ್ಯಕ್ರಮದ ನಂತರ ಭದ್ರಾವತಿ ಬ್ರದರ್ಸ್ ಸೌಂಡ್ಸ್ ಲೈಟಿಂಗ್ಸ್ ಅಂಡ್ ಇವೆಂಟ್ಸ್ ವತಿಯಿಂದ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದರ ಜೊತೆಗೆ, ಉತ್ತಮ ಸೇವೆ ಸಲ್ಲಿಸಿದ ಆಟೋ ಚಾಲಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸತೀಶ್, ಖಜಾಂಚಿ ಚೇತನ್, ಗೌರವ ಅಧ್ಯಕ್ಷ ರಜಾಕ್ ಹಾಗೂ ಸದಸ್ಯರಾದ ಮಿಥುನ್, ದೀಪು, ಸೋಮಣ್ಣ ಉಪಸ್ಥಿತರಿದ್ದರು.

 

ಹಂಚಿಕೊಳ್ಳಿ
5 1 vote
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x