ಭತ್ತ
ಬರಿದಾಗುತ್ತಿರುವ ಅನ್ನದ ಬಟ್ಟಲು………ಕೊಡಗಿಗೆ ಭತ್ತದ ಕೃಷಿಯ ಅನಿವಾರ್ಯತೆ
ಬರಿದಾಗುತ್ತಿರುವ ಅನ್ನದ ಬಟ್ಟಲು......... ಕೊಡಗಿಗೆ ಭತ್ತದ ಕೃಷಿಯ ಅನಿವಾರ್ಯತೆ ✍️....ಡಾ.ವೀರೇಂದ್ರ ಕುಮಾರ್ ಕೆ.ವಿ. ಐ.ಸಿ.ಎ.ಅರ್ - ಕೊಡಗು ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ ಭತ್ತವು ಕೊಡಗು ಜಿಲ್ಲೆಯ ಬಹು ಮುಖ್ಯ ಬೆಳೆ ಮತ್ತು ಅನ್ನವು ಇಲ್ಲಿನ ಜನರ ಬಹುಮುಖ್ಯ ಆಹಾರವಾಗಿದೆ. ಅಧಿಕ ಮಳೆ ಬೀಳುವ ಈ ಪ್ರದೇಶದಲ್ಲಿ ಭತ್ತದ ಬೆಳೆಯನ್ನು ಪರಂಪರಗತವಾಗಿ ಸಾಂಪ್ರದಾಯಿಕವಾಗಿ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕುಗಳಲ್ಲಿ ಹೆಚ್ಚು ಪ್ರದೇಶದಲ್ಲಿ ಬೆಳೆಸಿಕೊಂಡು ಬರಲಾಗುತ್ತಿತ್ತು. ದಶಕಗಳ ಹಿಂದೆ ಅನ್ನದ ಬಟ್ಟಲು ಎಂದು [...]
ಭತ್ತದಲ್ಲಿ ಬೀಜೋಪಚಾರ; ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ
ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ ಮಾಧ್ಯಮಗಳಿಂದ ಬೀಜದ ಮುಖಾಂತರ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ. ರೈತರು ಅತಿ ಸರಳ ಮತ್ತು ಕಡಿಮೆ ಖರ್ಚಿನಲ್ಲಿ ಬೀಜದಿಂದ ಪ್ರಸಾರವಾಗುವ ಈ ರೋಗಗಳನ್ನು ಬಿಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೀಜಗಳಿಗೆ, ಮೊಳಕೆಯೊಡೆಯುವ ಸಸಿಗಳಿಗೆ ಹಾಗೂ ಮುಂದಿನ ಸಸ್ಯ ಬೆಳವಣಿಗೆ ಹಂತದಲ್ಲಿ ಬರುವ ಅನೇಕ ರೋಗಗಳಿಂದ ರಕ್ಷಣೆ ಒದಗಿಸಬಹುದಾಗಿದೆ. [...]
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ; ಭತ್ತ ಸಸಿಮಡಿ ಕಾರ್ಯಕ್ಕೆ ಸಿದ್ಧತೆ
ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ; ಭತ್ತ ಸಸಿಮಡಿ ಕಾರ್ಯಕ್ಕೆ ಸಿದ್ಧತೆ ಜಿಲ್ಲೆಯಲ್ಲಿ ಮುಂಗಾರು ಸಕಾಲದಲ್ಲಿ ಆರಂಭವಾಗಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಭತ್ತ ಸಸಿಮಡಿ ಮಾಡುವ ಕಾರ್ಯಕ್ಕೆ ಸಿದ್ಧತೆಗಳು ನಡೆದಿವೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳದ ಬೆಳೆಗಳು ಪ್ರಮುಖವಾಗಿದ್ದು, ಈಗಾಗಲೇ ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಿದೆ. ಸೋಮವಾರಪೇಟೆ ತಾಲ್ಲೂಕಿನ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡುವ ಗುರಿ ಇದ್ದು, ಇದರಲ್ಲಿ ಈಗಾಗಲೇ [...]
ಭತ್ತ Paddy
ಭತ್ತ ಭತ್ತವು ಕೊಡಗು ಜಿಲ್ಲೆಯ ಮುಖ್ಯ ಆಹಾರ ಬೆಳೆಯಾಗಿದ್ದು,ಒಟ್ಟು ಮೂರು ತಾಲ್ಲೂಕುಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆಗಳಲ್ಲಿ ಸುಮಾರು 36,000 ಹೆಕ್ಟೇರು ಪ್ರದೇಶದಲ್ಲಿ ಮುಂಗಾರಿನಲ್ಲಿ ಬೀಳುವ ಮಳೆಯಾಶ್ರಯದಲ್ಲಿ ಬೆಳೆಯನ್ನು ತಗ್ಗು (ಬಯಲು) ಮಧ್ಯಮ (ಮಜಲು ಪ್ರದೇಶ) ಹಾಗೂ ಆಳವಾದ ಕಣಿವೆ ಪ್ರದೇಶದ ಗದ್ದೆಗಳಲ್ಲಿ ಬೆಳೆಂiÀiಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಭತ್ತದ ಪ್ರದೇಶವು ಕಡಿಮೆಯಾಗುತ್ತಿದ್ದು, ಭತ್ತದ ಇಳುವರಿಯಲ್ಲಿ ಕೂಡ ಇಳಿಮುಖವಾಗಿರುವುದು ಕಂಡು ಬಂದಿದೆ. ಆದ್ದರಿಂದ ಭತ್ತವನ್ನು ಸಮಗ್ರ ಬೇಸಾಯ ಪದ್ಧತಿಯಡಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವುದರೊಂದಿಗೆ [...]
ಸಮಗ್ರ ಪೀಡೆ ನಿರ್ವಹಣೆ
ಸಮಗ್ರ ಪೀಡೆ ನಿರ್ವಹಣೆ ಅವಶ್ಯಕತೆಗನುಗುಣವಾಗಿ ಪೀಡೆ ಬೆಳವಣಿಗೆಯ ವಿವಿಧ ಹಂತಗಳನ್ನು ಅರಿತು ಅವುಗಳ ಸಂಖ್ಯೆ, ಆರ್ಥಿಕ ಹಾನಿಯ ಪ್ರಮಾಣ ಮಿತಿಗಿಂತ ಹೆಚ್ಚಾಗಿದ್ದಲ್ಲಿ, ಅವುಗಳನ್ನು ನಿಯಂತ್ರಿಸಲು ಸಾಧ್ಯವಿರುವ ಎಲ್ಲಾ ನಿರ್ವಹಣಾ ವಿಧಾನಗಳನ್ನು ಸೂಕ್ತ ರೀತಿಯಲ್ಲಿ ಸಂಧರ್ಭಕ್ಕನುಸಾರವಾಗಿ ಅಳವಡಿಸಿ ನಿಸರ್ಗದಲ್ಲಿನ ಇತರೆ ಕ್ರ್ರಿಯೆಗಳಿಗೆ ಹಾನಿಯಾಗದಂತೆ ಪೀಡೆಗಳನ್ನು ಹತೋಟಿ ಮಾಡುವುದನ್ನು “ಸಮಗ್ರ ಪೀಡೆ ನಿರ್ವಹಣೆ” ಎನ್ನುವರು. ಸಮಗ್ರ ಪೀಡೆ ನಿರ್ವಹಣೆ ಈ ಕೆಳಗಿನ ಅಂಶಗಳನ್ನು ಒಳಗೊಂಡಿರುತ್ತದೆ • ಬೇಸಾಯ ಕ್ರಮ • ಯಾಂತ್ರಿಕ ಕ್ರಮ • ಜೈವಿಕ ಕ್ರಮ • ರಾಸಾಯನಿಕ [...]
ಮಣ್ಣು ಪರೀಕ್ಷೆಯ ಮಹತ್ವ ಮತ್ತು ವಿಧಾನ The importance and method of Soil Testing
ಮಣ್ಣು ಪರೀಕ್ಷೆಯ ಮಹತ್ವ ಮತ್ತು ವಿಧಾನ ಮಣ್ಣು ಪ್ರಕೃತಿದತ್ತವಾದ ನಿಸರ್ಗದ ಅಮೂಲ್ಯ ಸಂಪತ್ತು. ಸಸ್ಯಗಳಿಗೆ ಪೆÇೀಷಕಾಂಶಗಳನ್ನು ಒದಗಿಸುವ ಶಕ್ತಿಗೆ ಮಣ್ಣಿನ ಫಲವತ್ತತೆ ಎನ್ನುತ್ತೇವೆ. ಒಂದೇ ಕ್ಷೇತ್ರದಲ್ಲಿ ನಿರಂತರವಾಗಿ ಬೆಳೆ ಬೆಳೆಸುವುದರಿಂದ ಮಣ್ಣಿನಲ್ಲಿರುವ ಪೆÇೀಷಕಾಂಶಗಳ ಲಭ್ಯತೆಯ ಪ್ರಮಾಣ ಕ್ಷೀಣಿಸುತ್ತದೆ. ಪೆÇೀಷಕಾಂಶಗಳ ಲಭ್ಯತೆಯು ಮಣ್ಣಿನ ಭೌತಿಕ ಹಾಗು ಕೆಲವು ರಾಸಾಯನಿಕ ಕ್ರಿಯೆಗಳನ್ನು ಅವಲಂಬಿಸಿರುತ್ತದೆ. ಸಸ್ಯದ ಬೆಳೆವಣಿಗೆ ಮತ್ತು ವಯಸ್ಸಿನ ಆಧಾರದ ಮೇಲೆ ಪೆÇೀಷಕಾಂಶಗಳು ನಿರ್ಧಿಷ್ಟ ಪ್ರಮಾಣದಲ್ಲಿ ಬೇಕಾಗುತ್ತದೆ. ಆದುದರಿಂದ ಫಲವತ್ತಾದ ಮಣ್ಣು ಎಂದರೆ ಈ ಎಲ್ಲಾ ಪೆÇೀಷಕಾಂಷಗಳನ್ನು ಸಸ್ಯಗಳಿಗೆ ಬೇಕಾಗುವ [...]


